ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು
ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು
ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…