Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

4 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

7 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

19 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

20 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

22 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago