ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Share
Published by
Ramesh Babu

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

2 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

13 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

14 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

16 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

18 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

20 hours ago