ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Share
Published by
Ramesh Babu

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

3 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

4 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

9 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

11 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

13 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

15 hours ago