ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago