ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

1 hour ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

2 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

22 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago