ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

10 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago