ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ಯುವಕರ ಪಾತ್ರ ಮಹತ್ತರವಾದದ್ದು-ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್

ಜಗತ್ತಿನಲ್ಲಿ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಬಹಳ ಮಹತ್ವದ್ದಾಗಿದೆ ಯುವಕರು ತಮ್ಮ ಕುಟುಂಬಗಳಲ್ಲಿ, ಸಮಾಜದಲ್ಲಿ ತಿಳಿ ಹೇಳಬೇಕು ಎಂದು ದೊಡ್ಡಬಳ್ಳಾಪುರದ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸು ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮುನ್ನುಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಜಾಗೃತಿ ಅಭಿಯಾನ ನಡೆಯುತ್ತಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದರ ಮೂಲಕ ಕಡ್ಡಾಯ ಮತದಾನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿ.ಇ.ಓ ರೇವಣಪ್ಪ ಮಾತನಾಡಿ ಅರ್ಹರಿರುವ ಪ್ರತಿಯೊಬ್ಬ ಯುವಕರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು, ವಿದ್ಯಾರ್ಥಿಗಳು ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ವಿಷಯಗಳನ್ನ ಅಭ್ಯಾಸ ಮಾಡಬೇಕು, ನವ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನದ ಮೌಲ್ಯಗಳನ್ನು, ಸಂವಿಧಾನದ ಮಹತ್ವವನ್ನು , ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರಜ್ಞಾವಂತ ಯುವಕರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಿ.ಎ.ಓ ಗಂಗಾಧರಪ್ಪ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಕುಮಾರ್, ಇನಾಂದಾರ್, ಸಿ.ಡಿ.ಪಿ.ಓ.ಅನಿತಾ ಲಕ್ಷ್ಮಿ,
ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಎಚ್. ಆರ್. ಮ್ಯಾನೇಜರ್ ಬಾಬುರೆಡ್ಡಿ, ಕಸಬಾ ರಾಜಸ್ವ ನಿರೀಕ್ಷಕ ನರಸಿಂಹ, ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಿ.ಎಂ ಸುರೇಂದ್ರ ರೆಡ್ಡಿ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ. ಚೈತ್ರ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

15 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

16 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

22 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

23 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago