ಪ್ರಜಾಪ್ರಭುತ್ವ ಸದೃಢತೆಯಲ್ಲಿ ಸಂವಿಧಾನ ಪೀಠಿಕೆ ಮುಖ್ಯ ಪಾತ್ರ ವಹಿಸುತ್ತದೆ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಒಂದು ರಾಷ್ಟ್ರವು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸದೃಢವಾಗಲು ಆ ದೇಶದ ಸಂವಿಧಾನ ಪೀಠಿಕೆಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್‌ನ ಡಾ.ಬಿ. ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಅರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನದ ಪೀಠಿಕೆ ಬೋಧಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ  ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.

ದೇವನಹಳ್ಳಿ ಮಿನಿ ವಿಧಾನಸೌಧ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಡಾ. ಬಿ. ಆರ್. ಅಂಬೇಡ್ಕರ್ ಭವನದವರೆಗೂ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ, ದೊಡ್ಡಬಳ್ಳಾಪುರ ಡಿ.ವೈ.ಎಸ್.ಪಿ ರವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶ್ರೀಕಂಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್, ಸಂಪನ್ಮೂಲ ವ್ಯಕ್ತಿ ಡಾ.ಅಮೀರ್ ಪಾಷ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು,  ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago