ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ ಅವರು. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರೂರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ಮಾತನಾಡಿದ ಅವರು, ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದರು.
ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಕೊಂಡಾಡಿದರು.
ಯೋಜನಾ ಆಯೋಗ ರಚಿಸಿದರು, ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು, ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಶ್ಲಾಘನೆ ಮಾಡಿದರು.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…