ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು- ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ ಅವರು. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರೂರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ಮಾತನಾಡಿದ ಅವರು, ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಕೊಂಡಾಡಿದರು.

ಯೋಜನಾ ಆಯೋಗ ರಚಿಸಿದರು, ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು, ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಶ್ಲಾಘನೆ ಮಾಡಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago