ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ ಅವರು. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರೂರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ಮಾತನಾಡಿದ ಅವರು, ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದರು.
ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಕೊಂಡಾಡಿದರು.
ಯೋಜನಾ ಆಯೋಗ ರಚಿಸಿದರು, ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು, ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಶ್ಲಾಘನೆ ಮಾಡಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…