ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.
ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…