Categories: ಧಾರವಾಡ

ಪ್ರಜ್ಞೆ ತಪ್ಪುವ ಚಾಕಲೇಟ್ ತಿನ್ನಿಸಿ ಚಿನ್ನಾಭರಣ ಕಳ್ಳತನ

ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ‌್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.

ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ  ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡ ಶಹರ ಪೊಲೀಸರು ಸದ್ಯ ಮಹ್ಮದ್ ಶಮ್ಶದ್ ನನ್ನು ಬಂಧಿಸಿದ್ದಾರೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ಎಲ್ಲ ಪೊಲೀಸ್ ಠಾಣೆಗೆ ಈ ಪ್ರಕರಣದ ಮಾಹಿತಿ ನೀಡಿ, ಇಂತಹ ಪ್ರಕರಣಗಳ ಬಗ್ಗೆ‌ ನಿಗಾ ವಹಿಸಲು ಸೂಚಿಸಿದ್ದಾರೆ.

ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ‌ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ‌‌‌.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

4 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago