ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್ ಪುಲ್ ಆ್ಯಕ್ಟೀವ್ ಆಗಿದೆ. ಬಿಹಾರ ಮೂಲದ ಮಹ್ಮದ್ ಶಮ್ಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ ಒಂದೂವರೆ ತೊಲೆಯ ಬಂಗಾರದ ಚೈನ್ ಮತ್ತು 25 ಸಾವಿರ ಮೌಲ್ಯದ ವಿವೋ ಫೋನ್ ಕದ್ದು ಪರಾರಿಯಾಗಿದ್ದ. ಈ ಘಟನೆ ನಡೆದದ್ದು ನವೆಂಬರ್ 9 ರಂದು ನಗರದ ಶ್ರಿನಿವಾಸ ಚಿತ್ರಮಂದಿರದಲ್ಲಿ.
ಇನ್ನು ಎನ್ ಜಿ ಓ ದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ್ ಎಂಬುವರು ಸಿನಿಮಾ ನೋಡಲಿಕ್ಕೆ ಹೋಗಿದ್ದಾರೆ. ಆ ಸಮಯದಲ್ಲಿ ಮಲ್ಲಿಕಾರ್ಜುನ್ ಗೆ ಮಹ್ಮದ ಶಮ್ಶದ್ ಪರಿಚಯವಾಗುತ್ತೆ. ಪರಿಚಯದಿಂದ ಇಬ್ಬರು ಸೇರಿ ಚಲನಚಿತ್ರ ವೀಕ್ಷಣೆಗೆ ಹೋದಾಗ ಮಹ್ಮದ ಶಮ್ಶದ್ ಚಾಕಲೇಟ್ ಕೊಟ್ಡಿದ್ದಾನೆ. ಆ ಚಾಕಲೇಟ್ ನ ಮಲ್ಲಿಕಾರ್ಜುನ್ ತಿಂದು 10 ನಿಮಿಷದಲ್ಲಿ ಮೂರ್ಚೆ ಹೋಗುತ್ತಾನೆ. ಬಳಿಕ ಮಹ್ಮದ್ ಶಮ್ಶದ್ ಮಲ್ಲಿಕಾರ್ಜುನ್ ಬಳಿ ಇದ್ದ ಗೋಲ್ಡ ಚೈನ್ ಮತ್ತು ಮೋಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಜೊತೆಗೆ ಯಾವುದೇ ಕುರುಹುಗಳಿಲ್ಲದೆ ಒಂದೆ ತಿಂಗಳಲ್ಲಿ ಪ್ರಕರಣವನ್ನ ಬೇಧಿಸಿದ ಶಹರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ..ಇನ್ನು ಈ ಬಿಹಾರ ಮೂಲದ ಮಹ್ಮದ್ ಶಮಶದ್ ನ ಜೊತೆ ಯಾರಿದಾರೆ..ಎನ್ನುವುದರ ಬಗ್ಗೆ ಪೋಲಿಸರು ಪ್ರಕರಣವನ್ನ ಗಂಭಿರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…