ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ಹೇಳಿದ್ದಾರೆ.
ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು.
ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…