ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರವೆಸಗಿದ್ದ ಸಂತ್ರಸ್ತೆಯನ್ನು ರೇವಣ್ಣ ಮತ್ತು ಇತರರು ಕಿಡ್ನಾಪ್ ಮಾಡಿದ್ದಾರೆ. ಈ ಮೂಲಕ ಸಂತ್ರಸ್ತೆಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಈ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಗೆ ಕರೆದೊಯ್ದು ಬಂಧಿಸುವ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಚೇರಿಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಇದಾದ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…