ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರವೆಸಗಿದ್ದ ಸಂತ್ರಸ್ತೆಯನ್ನು ರೇವಣ್ಣ ಮತ್ತು ಇತರರು ಕಿಡ್ನಾಪ್ ಮಾಡಿದ್ದಾರೆ. ಈ ಮೂಲಕ ಸಂತ್ರಸ್ತೆಗೆ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಈ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಗೆ ಕರೆದೊಯ್ದು ಬಂಧಿಸುವ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಚೇರಿಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಇದಾದ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…