ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪೆನ್ ಡ್ರೈವ್ ಸೃಷ್ಟಿ ಮಾಡಿದ್ದೇ ಡಿಕೆಶಿ: ಎಸ್ಐಟಿ ಸರ್ಕಾರದ ಕೈಗೊಂಬೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಒತ್ತಾಯ

ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ‌ ಜಿಲ್ಲಾ ಜೆಡಿಎಸ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ‌. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ‌ ಎಂದು ಆರೋಪಿಸಿದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

2 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

12 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 day ago