ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪೆನ್ ಡ್ರೈವ್ ಸೃಷ್ಟಿ ಮಾಡಿದ್ದೇ ಡಿಕೆಶಿ: ಎಸ್ಐಟಿ ಸರ್ಕಾರದ ಕೈಗೊಂಬೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಒತ್ತಾಯ

ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ‌ ಜಿಲ್ಲಾ ಜೆಡಿಎಸ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ‌. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ‌ ಎಂದು ಆರೋಪಿಸಿದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

10 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

10 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

13 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago