ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್ಡ್ರೈವ್ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…