ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪೆನ್ ಡ್ರೈವ್ ಸೃಷ್ಟಿ ಮಾಡಿದ್ದೇ ಡಿಕೆಶಿ: ಎಸ್ಐಟಿ ಸರ್ಕಾರದ ಕೈಗೊಂಬೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಒತ್ತಾಯ

ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ‌ ಜಿಲ್ಲಾ ಜೆಡಿಎಸ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ‌. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ‌ ಎಂದು ಆರೋಪಿಸಿದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 hour ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

1 hour ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

2 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

7 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

7 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

21 hours ago