ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪೆನ್ ಡ್ರೈವ್ ಸೃಷ್ಟಿ ಮಾಡಿದ್ದೇ ಡಿಕೆಶಿ: ಎಸ್ಐಟಿ ಸರ್ಕಾರದ ಕೈಗೊಂಬೆ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಒತ್ತಾಯ

ರಾಜ್ಯ ಕಾಂಗ್ರೆಸ್ ಪಕ್ಷವು ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ಜೆಡಿಎಸ್ ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಒತ್ತಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ(ಟಿಬಿ ವೃತ್ತ) ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ‌ ಜಿಲ್ಲಾ ಜೆಡಿಎಸ್‌ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ‌. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆದುಕೊಳ್ಳುವ ಸಂಶಯವಿದೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೋ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ‌ ಎಂದು ಆರೋಪಿಸಿದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ, ಜೆಡಿಎಸ್ ಮುಖಂಡ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

10 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago