ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು.
ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.
ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ಪಿ ಸಿ.ಎ.ಸೈಮನ್, ಮಂಡ್ಯ ಜಿಲ್ಲೆ ಹಲಗೂರು ವೃತ್ತದ ಸಿಪಿಐ ಬಿ.ಎಸ್. ಶ್ರೀಧರ್, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಲ್ಲಭಕ್ಷ್, ಸಿಟಿ ಕಂಟ್ರೋಲ್ ರೂಮಿನ ಸಿಒಪಿ ಮಮತಾ, ಚಂದ್ರ ಲೇಔಟ್ ಠಾಣೆಯ ಸರಸ್ವತಿ ಎಸ್.ಎನ್, ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಗಳಾದ ಜಾಫರ್ ಸಾಧಿಕ್, ಹರೀಶ್ ಬಾಬು ಎಂ. ಅವರನ್ನು ತನಿಖಾ ತಂಡಕ್ಕೆ ನಿಯೋಜನೆ ಮಾಡಲಾಗಿದೆ.
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…