ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು.
ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.
ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ಪಿ ಸಿ.ಎ.ಸೈಮನ್, ಮಂಡ್ಯ ಜಿಲ್ಲೆ ಹಲಗೂರು ವೃತ್ತದ ಸಿಪಿಐ ಬಿ.ಎಸ್. ಶ್ರೀಧರ್, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಲ್ಲಭಕ್ಷ್, ಸಿಟಿ ಕಂಟ್ರೋಲ್ ರೂಮಿನ ಸಿಒಪಿ ಮಮತಾ, ಚಂದ್ರ ಲೇಔಟ್ ಠಾಣೆಯ ಸರಸ್ವತಿ ಎಸ್.ಎನ್, ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಗಳಾದ ಜಾಫರ್ ಸಾಧಿಕ್, ಹರೀಶ್ ಬಾಬು ಎಂ. ಅವರನ್ನು ತನಿಖಾ ತಂಡಕ್ಕೆ ನಿಯೋಜನೆ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…