ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು.
ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.
ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ಪಿ ಸಿ.ಎ.ಸೈಮನ್, ಮಂಡ್ಯ ಜಿಲ್ಲೆ ಹಲಗೂರು ವೃತ್ತದ ಸಿಪಿಐ ಬಿ.ಎಸ್. ಶ್ರೀಧರ್, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಲ್ಲಭಕ್ಷ್, ಸಿಟಿ ಕಂಟ್ರೋಲ್ ರೂಮಿನ ಸಿಒಪಿ ಮಮತಾ, ಚಂದ್ರ ಲೇಔಟ್ ಠಾಣೆಯ ಸರಸ್ವತಿ ಎಸ್.ಎನ್, ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಗಳಾದ ಜಾಫರ್ ಸಾಧಿಕ್, ಹರೀಶ್ ಬಾಬು ಎಂ. ಅವರನ್ನು ತನಿಖಾ ತಂಡಕ್ಕೆ ನಿಯೋಜನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…