ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು.
ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.
ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ಪಿ ಸಿ.ಎ.ಸೈಮನ್, ಮಂಡ್ಯ ಜಿಲ್ಲೆ ಹಲಗೂರು ವೃತ್ತದ ಸಿಪಿಐ ಬಿ.ಎಸ್. ಶ್ರೀಧರ್, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಲ್ಲಭಕ್ಷ್, ಸಿಟಿ ಕಂಟ್ರೋಲ್ ರೂಮಿನ ಸಿಒಪಿ ಮಮತಾ, ಚಂದ್ರ ಲೇಔಟ್ ಠಾಣೆಯ ಸರಸ್ವತಿ ಎಸ್.ಎನ್, ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಗಳಾದ ಜಾಫರ್ ಸಾಧಿಕ್, ಹರೀಶ್ ಬಾಬು ಎಂ. ಅವರನ್ನು ತನಿಖಾ ತಂಡಕ್ಕೆ ನಿಯೋಜನೆ ಮಾಡಲಾಗಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…