ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು.
ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.
ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ಪಿ ಸಿ.ಎ.ಸೈಮನ್, ಮಂಡ್ಯ ಜಿಲ್ಲೆ ಹಲಗೂರು ವೃತ್ತದ ಸಿಪಿಐ ಬಿ.ಎಸ್. ಶ್ರೀಧರ್, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಲ್ಲಭಕ್ಷ್, ಸಿಟಿ ಕಂಟ್ರೋಲ್ ರೂಮಿನ ಸಿಒಪಿ ಮಮತಾ, ಚಂದ್ರ ಲೇಔಟ್ ಠಾಣೆಯ ಸರಸ್ವತಿ ಎಸ್.ಎನ್, ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಗಳಾದ ಜಾಫರ್ ಸಾಧಿಕ್, ಹರೀಶ್ ಬಾಬು ಎಂ. ಅವರನ್ನು ತನಿಖಾ ತಂಡಕ್ಕೆ ನಿಯೋಜನೆ ಮಾಡಲಾಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…