ಪ್ರಜ್ವಲ್ ರೇವಣ್ಣ ಮೇಲೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ವಿಡಿಯೊ‌ ಮೂಲಕ ಪ್ರತ್ಯಕ್ಷ: ವಿಡಿಯೊದಲ್ಲಿ ಏನು ಹೇಳಿದ್ದಾರೆ..?

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, ಮೊದಲಿಗೆ ನನ್ನ‌ ತಾತ ದೇವೇಗೌಡರು, ನನ್ನ‌ ತಂದೆ-ತಾಯಿ, ಕುಮಾರಣ್ಣ, ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ ಎಂದು ಪ್ರಾರಂಭ ಮಾಡಿದ್ದಾರೆ.

ನಾನು ವಿದೇಶದಲ್ಲಿ ಎಲ್ಲಿ ಎದ್ದೇನೆ ಎಂದು ಸರಿಯಾದ ಮಾಹಿತಿ ನೀಡದೇ ಇದ್ದಿದ್ದಕ್ಕೆ ಕ್ಷಮೆ ಕೋರಿ, ಇಂದು ಮಾಹಿತಿ ನೀಡಲು ವಿಡಿಯೊ ಮಾಡಿದ್ದೇನೆ, ಮೇ. 26 ರಂದು ಚುನಾವಣೆ ನಡೆಯಿತು, ಅಂದು ನನ್ನ ಮೇಲೆ ದೂರು, ಪ್ರಕರಣ ಇರಲಿಲ್ಲ, ಎಸ್ಐಟಿ‌ ಕೂಡ ರಚನೆ ಆಗಿರಲಿಲ್ಲ, ಮೇ.26ಕ್ಕೆ ಕೂಡ ನಾನು ವಿದೇಶಕ್ಕೆ ಹೋಗೋದು ಮೊದಲೇ ನಿಶ್ಚಯವಾಗಿತ್ತು, ಹಾಗಾಗಿ ನಾನು ಫಾರಿನ್ ಗೆ ಹೋದೆ, ಫಾರಿನ್ ಗೆ ಹೋದ ನಂತರ ಯೂಟೂಬ್ ಹಾಗೂ ನ್ಯೂಸ್ ಚಾನಲ್ ನಲ್ಲಿ ಈ ಬಗ್ಗೆ ಮಾಹಿತಿ ದೊರೆಯಿತು. ಮಾಹಿತಿ ದೊರೆತ ನಂತರ ಎಸ್ಐಟಿ ನೋಟಿಸ್ ಕೊಡುವ ಕೆಲಸ ಆಯಿತು, ನನ್ನ ಎಕ್ಸ್ ಖಾತೆ ಮೂಲಕ ಹಾಗೂ ನನ್ನ ಲಾಯರ್ ಮೂಲಕ 7 ದಿನಗಳ ಕಾಲ ಸಮಯಾವಕಾಶ ಕೇಳಿದ್ದೆ, ಕೇಳಿದ ಮೇಲೆ ಅದರ ಮರುದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಈ ವಿಚಾರವನ್ನ ಪ್ರಚಾರ, ಚರ್ಚೆ ಮಾಡಿ ರಾಜಕೀಯ ಪಿತೂರಿ ಮಾಡುವ ಕೆಲಸ‌ ಮಾಡಿದರು.

ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದ ಮೇಲೆ ನಾನು ಖಿನ್ನತೆಯಿಂದ ಐಸೋಲೇಷನ್ ಗೆ ಹೋಗಿದ್ದೆ.

ಹಾಸನದಲ್ಲೂ ಕೆಲ ಶಕ್ತಿಗಳು ಎಲ್ಲವೂ ಒಟ್ಟಿಗೆ ಸೇರಿ ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡುವಂತ ಕೆಲಸ ಆಗಿದೆ.

ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಏನಾದರೂ ಮಾಡಿ ನನ್ನನ್ನು ಕುಗ್ಗಿಸಬೇಕು ಎಂದು ಭಾವಿಸಿದರು. ಈ ಎಲ್ಲವನ್ನೂ ನೋಡಿ ಅಘಾತಗೊಂಡು ನಾನೇ ದೂರ ಉಳಿದೆ. ಹಾಗಾಗಿ ಇದರ ಬಗ್ಗೆ ಯಾರೂ ಕೂಡ ತಪ್ಪು ತಿಳಿಯುವುದು ಬೇಡ, ನಾನೇ ಖುದ್ದಾಗಿ ಮೇ.30ರ ಶುಕ್ರವಾರ ಬೆಳಗ್ಗೆ 10ಕ್ಕೆ ಎಸ್ಐಟಿ ಮುಂದೆ ಬಂದು ಈ ಪ್ರಕರಣಕ್ಕೆ ಸಹಕಾರ ನೀಡುವ ಮೂಲಕ ಸರಿಯಾದ ರೀತಿ ಉತ್ತರ ನೀಡುತ್ತೇನೆ.

ನ್ಯಾಯಾಲದ ಮೇಲೆ ನಂಬಿಕೆ ಇದೆ, ನನ್ನ ಮೇಲೆ ಸುಳ್ಳ ಪ್ರಕರಣಗಳಿವೆ ನ್ಯಾಯಾಲದ ಮೂಲಕ ಸುಳ್ಳ ಪ್ರಕರಣಗಳಿಂದ ಹೊರಬರುತ್ತೇನೆ ಎಂಬ ನನಗೆ ನಂಬಿಕೆ ಇದೆ ಎಂದು ವಿಡಿಯೋದಲ್ಲಿ‌ ಹೇಳಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago