ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, ಮೊದಲಿಗೆ ನನ್ನ ತಾತ ದೇವೇಗೌಡರು, ನನ್ನ ತಂದೆ-ತಾಯಿ, ಕುಮಾರಣ್ಣ, ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ ಎಂದು ಪ್ರಾರಂಭ ಮಾಡಿದ್ದಾರೆ.
ನಾನು ವಿದೇಶದಲ್ಲಿ ಎಲ್ಲಿ ಎದ್ದೇನೆ ಎಂದು ಸರಿಯಾದ ಮಾಹಿತಿ ನೀಡದೇ ಇದ್ದಿದ್ದಕ್ಕೆ ಕ್ಷಮೆ ಕೋರಿ, ಇಂದು ಮಾಹಿತಿ ನೀಡಲು ವಿಡಿಯೊ ಮಾಡಿದ್ದೇನೆ, ಮೇ. 26 ರಂದು ಚುನಾವಣೆ ನಡೆಯಿತು, ಅಂದು ನನ್ನ ಮೇಲೆ ದೂರು, ಪ್ರಕರಣ ಇರಲಿಲ್ಲ, ಎಸ್ಐಟಿ ಕೂಡ ರಚನೆ ಆಗಿರಲಿಲ್ಲ, ಮೇ.26ಕ್ಕೆ ಕೂಡ ನಾನು ವಿದೇಶಕ್ಕೆ ಹೋಗೋದು ಮೊದಲೇ ನಿಶ್ಚಯವಾಗಿತ್ತು, ಹಾಗಾಗಿ ನಾನು ಫಾರಿನ್ ಗೆ ಹೋದೆ, ಫಾರಿನ್ ಗೆ ಹೋದ ನಂತರ ಯೂಟೂಬ್ ಹಾಗೂ ನ್ಯೂಸ್ ಚಾನಲ್ ನಲ್ಲಿ ಈ ಬಗ್ಗೆ ಮಾಹಿತಿ ದೊರೆಯಿತು. ಮಾಹಿತಿ ದೊರೆತ ನಂತರ ಎಸ್ಐಟಿ ನೋಟಿಸ್ ಕೊಡುವ ಕೆಲಸ ಆಯಿತು, ನನ್ನ ಎಕ್ಸ್ ಖಾತೆ ಮೂಲಕ ಹಾಗೂ ನನ್ನ ಲಾಯರ್ ಮೂಲಕ 7 ದಿನಗಳ ಕಾಲ ಸಮಯಾವಕಾಶ ಕೇಳಿದ್ದೆ, ಕೇಳಿದ ಮೇಲೆ ಅದರ ಮರುದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಈ ವಿಚಾರವನ್ನ ಪ್ರಚಾರ, ಚರ್ಚೆ ಮಾಡಿ ರಾಜಕೀಯ ಪಿತೂರಿ ಮಾಡುವ ಕೆಲಸ ಮಾಡಿದರು.
ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದ ಮೇಲೆ ನಾನು ಖಿನ್ನತೆಯಿಂದ ಐಸೋಲೇಷನ್ ಗೆ ಹೋಗಿದ್ದೆ.
ಹಾಸನದಲ್ಲೂ ಕೆಲ ಶಕ್ತಿಗಳು ಎಲ್ಲವೂ ಒಟ್ಟಿಗೆ ಸೇರಿ ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡುವಂತ ಕೆಲಸ ಆಗಿದೆ.
ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಏನಾದರೂ ಮಾಡಿ ನನ್ನನ್ನು ಕುಗ್ಗಿಸಬೇಕು ಎಂದು ಭಾವಿಸಿದರು. ಈ ಎಲ್ಲವನ್ನೂ ನೋಡಿ ಅಘಾತಗೊಂಡು ನಾನೇ ದೂರ ಉಳಿದೆ. ಹಾಗಾಗಿ ಇದರ ಬಗ್ಗೆ ಯಾರೂ ಕೂಡ ತಪ್ಪು ತಿಳಿಯುವುದು ಬೇಡ, ನಾನೇ ಖುದ್ದಾಗಿ ಮೇ.30ರ ಶುಕ್ರವಾರ ಬೆಳಗ್ಗೆ 10ಕ್ಕೆ ಎಸ್ಐಟಿ ಮುಂದೆ ಬಂದು ಈ ಪ್ರಕರಣಕ್ಕೆ ಸಹಕಾರ ನೀಡುವ ಮೂಲಕ ಸರಿಯಾದ ರೀತಿ ಉತ್ತರ ನೀಡುತ್ತೇನೆ.
ನ್ಯಾಯಾಲದ ಮೇಲೆ ನಂಬಿಕೆ ಇದೆ, ನನ್ನ ಮೇಲೆ ಸುಳ್ಳ ಪ್ರಕರಣಗಳಿವೆ ನ್ಯಾಯಾಲದ ಮೂಲಕ ಸುಳ್ಳ ಪ್ರಕರಣಗಳಿಂದ ಹೊರಬರುತ್ತೇನೆ ಎಂಬ ನನಗೆ ನಂಬಿಕೆ ಇದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…