ಪ್ರಜ್ವಲ್ ರೇವಣ್ಣ ಮೇಲೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ವಿಡಿಯೊ‌ ಮೂಲಕ ಪ್ರತ್ಯಕ್ಷ: ವಿಡಿಯೊದಲ್ಲಿ ಏನು ಹೇಳಿದ್ದಾರೆ..?

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, ಮೊದಲಿಗೆ ನನ್ನ‌ ತಾತ ದೇವೇಗೌಡರು, ನನ್ನ‌ ತಂದೆ-ತಾಯಿ, ಕುಮಾರಣ್ಣ, ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ ಎಂದು ಪ್ರಾರಂಭ ಮಾಡಿದ್ದಾರೆ.

ನಾನು ವಿದೇಶದಲ್ಲಿ ಎಲ್ಲಿ ಎದ್ದೇನೆ ಎಂದು ಸರಿಯಾದ ಮಾಹಿತಿ ನೀಡದೇ ಇದ್ದಿದ್ದಕ್ಕೆ ಕ್ಷಮೆ ಕೋರಿ, ಇಂದು ಮಾಹಿತಿ ನೀಡಲು ವಿಡಿಯೊ ಮಾಡಿದ್ದೇನೆ, ಮೇ. 26 ರಂದು ಚುನಾವಣೆ ನಡೆಯಿತು, ಅಂದು ನನ್ನ ಮೇಲೆ ದೂರು, ಪ್ರಕರಣ ಇರಲಿಲ್ಲ, ಎಸ್ಐಟಿ‌ ಕೂಡ ರಚನೆ ಆಗಿರಲಿಲ್ಲ, ಮೇ.26ಕ್ಕೆ ಕೂಡ ನಾನು ವಿದೇಶಕ್ಕೆ ಹೋಗೋದು ಮೊದಲೇ ನಿಶ್ಚಯವಾಗಿತ್ತು, ಹಾಗಾಗಿ ನಾನು ಫಾರಿನ್ ಗೆ ಹೋದೆ, ಫಾರಿನ್ ಗೆ ಹೋದ ನಂತರ ಯೂಟೂಬ್ ಹಾಗೂ ನ್ಯೂಸ್ ಚಾನಲ್ ನಲ್ಲಿ ಈ ಬಗ್ಗೆ ಮಾಹಿತಿ ದೊರೆಯಿತು. ಮಾಹಿತಿ ದೊರೆತ ನಂತರ ಎಸ್ಐಟಿ ನೋಟಿಸ್ ಕೊಡುವ ಕೆಲಸ ಆಯಿತು, ನನ್ನ ಎಕ್ಸ್ ಖಾತೆ ಮೂಲಕ ಹಾಗೂ ನನ್ನ ಲಾಯರ್ ಮೂಲಕ 7 ದಿನಗಳ ಕಾಲ ಸಮಯಾವಕಾಶ ಕೇಳಿದ್ದೆ, ಕೇಳಿದ ಮೇಲೆ ಅದರ ಮರುದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಈ ವಿಚಾರವನ್ನ ಪ್ರಚಾರ, ಚರ್ಚೆ ಮಾಡಿ ರಾಜಕೀಯ ಪಿತೂರಿ ಮಾಡುವ ಕೆಲಸ‌ ಮಾಡಿದರು.

ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದ ಮೇಲೆ ನಾನು ಖಿನ್ನತೆಯಿಂದ ಐಸೋಲೇಷನ್ ಗೆ ಹೋಗಿದ್ದೆ.

ಹಾಸನದಲ್ಲೂ ಕೆಲ ಶಕ್ತಿಗಳು ಎಲ್ಲವೂ ಒಟ್ಟಿಗೆ ಸೇರಿ ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡುವಂತ ಕೆಲಸ ಆಗಿದೆ.

ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಏನಾದರೂ ಮಾಡಿ ನನ್ನನ್ನು ಕುಗ್ಗಿಸಬೇಕು ಎಂದು ಭಾವಿಸಿದರು. ಈ ಎಲ್ಲವನ್ನೂ ನೋಡಿ ಅಘಾತಗೊಂಡು ನಾನೇ ದೂರ ಉಳಿದೆ. ಹಾಗಾಗಿ ಇದರ ಬಗ್ಗೆ ಯಾರೂ ಕೂಡ ತಪ್ಪು ತಿಳಿಯುವುದು ಬೇಡ, ನಾನೇ ಖುದ್ದಾಗಿ ಮೇ.30ರ ಶುಕ್ರವಾರ ಬೆಳಗ್ಗೆ 10ಕ್ಕೆ ಎಸ್ಐಟಿ ಮುಂದೆ ಬಂದು ಈ ಪ್ರಕರಣಕ್ಕೆ ಸಹಕಾರ ನೀಡುವ ಮೂಲಕ ಸರಿಯಾದ ರೀತಿ ಉತ್ತರ ನೀಡುತ್ತೇನೆ.

ನ್ಯಾಯಾಲದ ಮೇಲೆ ನಂಬಿಕೆ ಇದೆ, ನನ್ನ ಮೇಲೆ ಸುಳ್ಳ ಪ್ರಕರಣಗಳಿವೆ ನ್ಯಾಯಾಲದ ಮೂಲಕ ಸುಳ್ಳ ಪ್ರಕರಣಗಳಿಂದ ಹೊರಬರುತ್ತೇನೆ ಎಂಬ ನನಗೆ ನಂಬಿಕೆ ಇದೆ ಎಂದು ವಿಡಿಯೋದಲ್ಲಿ‌ ಹೇಳಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

20 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago