ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, ಮೊದಲಿಗೆ ನನ್ನ ತಾತ ದೇವೇಗೌಡರು, ನನ್ನ ತಂದೆ-ತಾಯಿ, ಕುಮಾರಣ್ಣ, ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ ಎಂದು ಪ್ರಾರಂಭ ಮಾಡಿದ್ದಾರೆ.
ನಾನು ವಿದೇಶದಲ್ಲಿ ಎಲ್ಲಿ ಎದ್ದೇನೆ ಎಂದು ಸರಿಯಾದ ಮಾಹಿತಿ ನೀಡದೇ ಇದ್ದಿದ್ದಕ್ಕೆ ಕ್ಷಮೆ ಕೋರಿ, ಇಂದು ಮಾಹಿತಿ ನೀಡಲು ವಿಡಿಯೊ ಮಾಡಿದ್ದೇನೆ, ಮೇ. 26 ರಂದು ಚುನಾವಣೆ ನಡೆಯಿತು, ಅಂದು ನನ್ನ ಮೇಲೆ ದೂರು, ಪ್ರಕರಣ ಇರಲಿಲ್ಲ, ಎಸ್ಐಟಿ ಕೂಡ ರಚನೆ ಆಗಿರಲಿಲ್ಲ, ಮೇ.26ಕ್ಕೆ ಕೂಡ ನಾನು ವಿದೇಶಕ್ಕೆ ಹೋಗೋದು ಮೊದಲೇ ನಿಶ್ಚಯವಾಗಿತ್ತು, ಹಾಗಾಗಿ ನಾನು ಫಾರಿನ್ ಗೆ ಹೋದೆ, ಫಾರಿನ್ ಗೆ ಹೋದ ನಂತರ ಯೂಟೂಬ್ ಹಾಗೂ ನ್ಯೂಸ್ ಚಾನಲ್ ನಲ್ಲಿ ಈ ಬಗ್ಗೆ ಮಾಹಿತಿ ದೊರೆಯಿತು. ಮಾಹಿತಿ ದೊರೆತ ನಂತರ ಎಸ್ಐಟಿ ನೋಟಿಸ್ ಕೊಡುವ ಕೆಲಸ ಆಯಿತು, ನನ್ನ ಎಕ್ಸ್ ಖಾತೆ ಮೂಲಕ ಹಾಗೂ ನನ್ನ ಲಾಯರ್ ಮೂಲಕ 7 ದಿನಗಳ ಕಾಲ ಸಮಯಾವಕಾಶ ಕೇಳಿದ್ದೆ, ಕೇಳಿದ ಮೇಲೆ ಅದರ ಮರುದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಈ ವಿಚಾರವನ್ನ ಪ್ರಚಾರ, ಚರ್ಚೆ ಮಾಡಿ ರಾಜಕೀಯ ಪಿತೂರಿ ಮಾಡುವ ಕೆಲಸ ಮಾಡಿದರು.
ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದ ಮೇಲೆ ನಾನು ಖಿನ್ನತೆಯಿಂದ ಐಸೋಲೇಷನ್ ಗೆ ಹೋಗಿದ್ದೆ.
ಹಾಸನದಲ್ಲೂ ಕೆಲ ಶಕ್ತಿಗಳು ಎಲ್ಲವೂ ಒಟ್ಟಿಗೆ ಸೇರಿ ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡುವಂತ ಕೆಲಸ ಆಗಿದೆ.
ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಏನಾದರೂ ಮಾಡಿ ನನ್ನನ್ನು ಕುಗ್ಗಿಸಬೇಕು ಎಂದು ಭಾವಿಸಿದರು. ಈ ಎಲ್ಲವನ್ನೂ ನೋಡಿ ಅಘಾತಗೊಂಡು ನಾನೇ ದೂರ ಉಳಿದೆ. ಹಾಗಾಗಿ ಇದರ ಬಗ್ಗೆ ಯಾರೂ ಕೂಡ ತಪ್ಪು ತಿಳಿಯುವುದು ಬೇಡ, ನಾನೇ ಖುದ್ದಾಗಿ ಮೇ.30ರ ಶುಕ್ರವಾರ ಬೆಳಗ್ಗೆ 10ಕ್ಕೆ ಎಸ್ಐಟಿ ಮುಂದೆ ಬಂದು ಈ ಪ್ರಕರಣಕ್ಕೆ ಸಹಕಾರ ನೀಡುವ ಮೂಲಕ ಸರಿಯಾದ ರೀತಿ ಉತ್ತರ ನೀಡುತ್ತೇನೆ.
ನ್ಯಾಯಾಲದ ಮೇಲೆ ನಂಬಿಕೆ ಇದೆ, ನನ್ನ ಮೇಲೆ ಸುಳ್ಳ ಪ್ರಕರಣಗಳಿವೆ ನ್ಯಾಯಾಲದ ಮೂಲಕ ಸುಳ್ಳ ಪ್ರಕರಣಗಳಿಂದ ಹೊರಬರುತ್ತೇನೆ ಎಂಬ ನನಗೆ ನಂಬಿಕೆ ಇದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…