ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…