ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಇವತ್ತು ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿರೋದು ಸಮಾಧಾನ ತಂದಿದೆ- ಮಾಜಿ ಸಿಎಂ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ‌ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ.‌‌ ಈಗ ನಮಗೂ ಕೂಡ‌ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.

ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ನಂತರ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿ ವಾಪಸ್ ದೇಶಕ್ಕೆ ಬರೋದಾಗಿ ಹೇಳಿದ್ದಾರೆ. ಆದರೆ, ಅವರು ಈ ಕೆಲಸ ಮುಂಚೆಯೇ ಮಾಡಬೇಕಿತ್ತು. ಈ ಕುರಿತು ಮುಂಚಿತವಾಗಿ ಹೇಳಿದ್ದರೆ ಅದಕ್ಕೆ ಒಂದು ಅರ್ಥ ಇರೋದು. ಈಗ ಹೇಳಿರೋದು ಬಹಳ ನಿಧಾನ ಎಂದು ಭಾವಿಸಲಾಗುತ್ತದೆ. ಇಷ್ಟಾದರೂ ಈಗಾಗಲಾದರು ಹೇಳಿದ್ದರಲ್ಲ, ಕಾನೂನಿಗಿಂತ ದೊಡ್ಡೋರು ಯಾರೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.

ತದನಂತರ ಮಾಜಿ ಸಚಿವ ಡಾ.ಅಶ್ವತ್ ನಾರಾಯಣ ಮಾತನಾಡಿ, ಈ‌ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ವಿಡಿಯೋ ಮಾಡಿರುವವರು, ವಿಡಿಯೋ ಹಂಚಿದವರು ಇವರಿಬ್ಬರಿಗೂ ಶಿಕ್ಷೆ ಆಗಬೇಕು. ಒಟ್ಟು ಯಾರೇ ಕೂಡ ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

7 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

7 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

10 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

10 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

19 hours ago