ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…