ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಇವತ್ತು ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿರೋದು ಸಮಾಧಾನ ತಂದಿದೆ- ಮಾಜಿ ಸಿಎಂ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ‌ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ.‌‌ ಈಗ ನಮಗೂ ಕೂಡ‌ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.

ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ನಂತರ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿ ವಾಪಸ್ ದೇಶಕ್ಕೆ ಬರೋದಾಗಿ ಹೇಳಿದ್ದಾರೆ. ಆದರೆ, ಅವರು ಈ ಕೆಲಸ ಮುಂಚೆಯೇ ಮಾಡಬೇಕಿತ್ತು. ಈ ಕುರಿತು ಮುಂಚಿತವಾಗಿ ಹೇಳಿದ್ದರೆ ಅದಕ್ಕೆ ಒಂದು ಅರ್ಥ ಇರೋದು. ಈಗ ಹೇಳಿರೋದು ಬಹಳ ನಿಧಾನ ಎಂದು ಭಾವಿಸಲಾಗುತ್ತದೆ. ಇಷ್ಟಾದರೂ ಈಗಾಗಲಾದರು ಹೇಳಿದ್ದರಲ್ಲ, ಕಾನೂನಿಗಿಂತ ದೊಡ್ಡೋರು ಯಾರೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.

ತದನಂತರ ಮಾಜಿ ಸಚಿವ ಡಾ.ಅಶ್ವತ್ ನಾರಾಯಣ ಮಾತನಾಡಿ, ಈ‌ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ವಿಡಿಯೋ ಮಾಡಿರುವವರು, ವಿಡಿಯೋ ಹಂಚಿದವರು ಇವರಿಬ್ಬರಿಗೂ ಶಿಕ್ಷೆ ಆಗಬೇಕು. ಒಟ್ಟು ಯಾರೇ ಕೂಡ ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago