ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…