ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…