ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…