ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ನಾನೂ ಕೂಡ ಪ್ರಜ್ವಲ್ ಗೆ ಮನವಿ ಮಾಡಿದ್ದೇನೆ. ಕಾರ್ಯಕರ್ತರ ಮೇಲೆ ಗೌರವ ಇದ್ದರೆ ತಕ್ಷಣ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿದ್ದಾರೆ. ಈಗ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕ್ರಿಯೆಗಳು ಏನು ಆಗಬೇಕೋ ಅದು ಆಗುತ್ತದೆ. ಸತ್ಯಾಂಶಗಳ ಕುರಿತು ತನಿಖೆಯಿಂದ ಹೊರಬರಲಿದೆ ಎಂದರು.
ವಿಡಿಯೊ ಮಾಡಿ ಕಾರ್ಯಕರ್ತರ ಮೇಲೆ ಈಗಲೂ ಮಮಕಾರ ಇದೆ ಎಂದು ತೋರಿಸಿರೋದು ನನಗೂ ಸಮಾಧಾನವಿದೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಷಡ್ಯಂತ್ರ ಮಾಡಿರೋದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ. ಯಾರು ಪೆನ್ ಡ್ರೈವ್ ಹಂಚಿದ್ದಾರೆ ಅವರನ್ನು ಇದೂವರೆಗೂ ಅರೆಸ್ಟ್ ಮಾಡಿಲ್ಲ, ಬೇಲೂ ಕೊಟ್ಟಿಲ್ಲ ಇದು ಷಡ್ಯಂತ್ರ ಎಂದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಒಕ್ಕಲಿಗರನ್ನ ಮುಗಿಸುವ ಷಡ್ಯಂತ್ರ ಮಾಡಿದೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ಆಗಬೇಕು ಎಂಬುದು ಬಿಜೆಪಿ ನಿಲುವು ಆಗಿದೆ ಎಂದು ಹೇಳಿದ್ದಾರೆ.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…