Categories: ಕೋಲಾರ

ಪ್ರಜ್ವಲ್ ವಿರುದ್ದ ಮೇ.30ರ ಹೋರಾಟದ ಪೋಸ್ಟರ್ ಬಿಡುಗಡೆ

ಕೋಲಾರ: ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಮಹಿಳೆಯರ ಘನತೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆ ಕುರಿತಂತೆ ನಗರದ ನಚಿಕೇತ ನಿಲಯದಲ್ಲಿ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳು ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜನಪರ ಚಳುವಳಿಗಳ ಒಕ್ಕೂಟ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಗೌರವವನ್ನು ಕಳೆದಿರುವ ಘಟನೆ ಇದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದಲೂ ಮಹಿಳಾ, ದಲಿತ, ಕಾರ್ಮಿಕ, ರೈತ, ಅಲ್ಪಸಂಖ್ಯಾತ, ಹಿಂದುಳಿದ, ಲಿಂಗತ್ವ ಅಲ್ಪಸಂಖ್ಯಾತ, ವಿದ್ಯಾರ್ಥಿಗಳು ಹೆಚ್ಚಿನ ರೀತ ಭಾಗವಹಿಸಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಈ ನೀಚ ಕೃತ್ಯವನ್ನು ಸೆರೆಹಿಡಿದವರು, ನಂತರ ಆ ವಿಡಿಯೋಗಳನ್ನು ಪೆನ್ ಡ್ರೈವ್‌ಗಳ ಮೂಲಕ ಹಂಚಿಕೆ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇದೊಂದು ಅಂತಾರಾಷ್ಟ್ರೀಯ ಮಟ್ಟದ ಹೀನ ಕೃತ್ಯವಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಲ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಂತಮ್ಮ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದ್ದು, ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ, ಆರೋಪಿಯನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳುವ ಬದಲಾಗಿ ಸಂತ್ರಸ್ತರನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ. ಅವರನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಅವರ ಕುಟುಂಬಕ್ಕೆ ರಾಜಕೀಯ ಅಧಿಕಾರದಿಂದ ದೂರವಿಡಬೇಕು. ಈ ನಿಟ್ಟಿನಲ್ಲಿ ಮೇ. 30 ರಂದು ಬೃಹತ್ ಹೋರಾಟವನ್ನು ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲು ಜನಪರ ಸಂಘಟನೆಗಳು ತೀರ್ಮಾನಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿ.ಗೀತಾ ಎಂ.ವಿಜಯಕೃಷ್ಣ, ಭೀಮರಾಜ್, ಮಹಮ್ಮದ್ ಮುಸ್ತಫಾ, ಮಂಜುನಾಥ್, ಸಭೀನಾ ಇದ್ದರು

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

11 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

11 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

13 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

21 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

23 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago