Categories: ಕೋಲಾರ

ಪ್ರಜ್ವಲ್ ವಿರುದ್ದ ಮೇ.30ರ ಹೋರಾಟದ ಪೋಸ್ಟರ್ ಬಿಡುಗಡೆ

ಕೋಲಾರ: ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಮಹಿಳೆಯರ ಘನತೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದಿಂದ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆ ಕುರಿತಂತೆ ನಗರದ ನಚಿಕೇತ ನಿಲಯದಲ್ಲಿ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳು ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜನಪರ ಚಳುವಳಿಗಳ ಒಕ್ಕೂಟ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಗೌರವವನ್ನು ಕಳೆದಿರುವ ಘಟನೆ ಇದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದಲೂ ಮಹಿಳಾ, ದಲಿತ, ಕಾರ್ಮಿಕ, ರೈತ, ಅಲ್ಪಸಂಖ್ಯಾತ, ಹಿಂದುಳಿದ, ಲಿಂಗತ್ವ ಅಲ್ಪಸಂಖ್ಯಾತ, ವಿದ್ಯಾರ್ಥಿಗಳು ಹೆಚ್ಚಿನ ರೀತ ಭಾಗವಹಿಸಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಈ ನೀಚ ಕೃತ್ಯವನ್ನು ಸೆರೆಹಿಡಿದವರು, ನಂತರ ಆ ವಿಡಿಯೋಗಳನ್ನು ಪೆನ್ ಡ್ರೈವ್‌ಗಳ ಮೂಲಕ ಹಂಚಿಕೆ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇದೊಂದು ಅಂತಾರಾಷ್ಟ್ರೀಯ ಮಟ್ಟದ ಹೀನ ಕೃತ್ಯವಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಲ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಂತಮ್ಮ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದ್ದು, ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ, ಆರೋಪಿಯನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳುವ ಬದಲಾಗಿ ಸಂತ್ರಸ್ತರನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ. ಅವರನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಅವರ ಕುಟುಂಬಕ್ಕೆ ರಾಜಕೀಯ ಅಧಿಕಾರದಿಂದ ದೂರವಿಡಬೇಕು. ಈ ನಿಟ್ಟಿನಲ್ಲಿ ಮೇ. 30 ರಂದು ಬೃಹತ್ ಹೋರಾಟವನ್ನು ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲು ಜನಪರ ಸಂಘಟನೆಗಳು ತೀರ್ಮಾನಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿ.ಗೀತಾ ಎಂ.ವಿಜಯಕೃಷ್ಣ, ಭೀಮರಾಜ್, ಮಹಮ್ಮದ್ ಮುಸ್ತಫಾ, ಮಂಜುನಾಥ್, ಸಭೀನಾ ಇದ್ದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago