Categories: ರಾಜ್ಯ

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿಯು ಆರ್. ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಾವು ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೆ ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ. ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಸ್ಪದವಾಗಿದೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ. ಅಡಿಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದು ಯಡಿಯೂರಪ್ಪನವರಿಗೆ ಬಿದ್ದಿರುವ ಕನಸಾಗಿರಬಹುದು, ಆದರೆ ಅದು ನನಸಾಗಲ್ಲ. ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಬಿಜೆಪಿಯ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ನಾವು ನೀವೆಲ್ಲ ನೋಡಬಹುದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

5 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

12 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

12 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

18 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago