Categories: ರಾಜ್ಯ

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿಯು ಆರ್. ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಾವು ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೆ ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ. ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಸ್ಪದವಾಗಿದೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ. ಅಡಿಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದು ಯಡಿಯೂರಪ್ಪನವರಿಗೆ ಬಿದ್ದಿರುವ ಕನಸಾಗಿರಬಹುದು, ಆದರೆ ಅದು ನನಸಾಗಲ್ಲ. ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಬಿಜೆಪಿಯ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ನಾವು ನೀವೆಲ್ಲ ನೋಡಬಹುದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago