Categories: ರಾಜ್ಯ

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿಯು ಆರ್. ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಾವು ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದ್ದೇವೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೆ ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ. ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಸ್ಪದವಾಗಿದೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ ಅದರ ಬಗ್ಗೆ ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ. ಅಡಿಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದು ಯಡಿಯೂರಪ್ಪನವರಿಗೆ ಬಿದ್ದಿರುವ ಕನಸಾಗಿರಬಹುದು, ಆದರೆ ಅದು ನನಸಾಗಲ್ಲ. ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಬಿಜೆಪಿಯ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ನಾವು ನೀವೆಲ್ಲ ನೋಡಬಹುದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago