ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಮತ್ತು ದೇಶದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಬೆಂಬಲ ವ್ಯಕ್ತಪಡಿಸಿದ್ದಾರೆ.
“ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡುವುದರೊಂದಿಗೆ ಏನಾಯಿತು ಎಂಬುದನ್ನು ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
36 ದಿನಗಳಿಂದ ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪರವಾಗಿ ದನಿಯೆತ್ತಿದ ಮೊದಲ ಕ್ರಿಕೆಟಿಗ ಎಂಬ ಖ್ಯಾತಿಗೆ ಅನಿಲ್ ಕುಂಬ್ಳೆ ಪಾತ್ರರಾಗಿದ್ದಾರೆ.
ಇನ್ನು ತಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ಹಲ್ಲೆಯ ಮೂಲಕ, ಪ್ರತಿಭಟನೆಗೆ ಜಾಗ ನಿರಾಕರಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವುದಕ್ಕೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗಣ್ಯ ಅಥ್ಲೀಟ್ಗಳಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, ನಾವು ಗೆದ್ದ ಪದಕಗಳನ್ನ ಗಂಗಾ ನದಿಗೆ ಎಸೆದು ಅಮರಣಾಂತ ಉಪವಾಸ ಕೂರುತ್ತೇವೆ” ಎಂದು ಪತ್ರ ಬರೆದಿದ್ದಾರೆ.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…