ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.
ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.
ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.
ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ, ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…