ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.
ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.
ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.
ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ, ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…