Categories: ರಾಜ್ಯ

ಪ್ರತಿಭಟನೆ ಸ್ಥಳಕ್ಕೆ ಬಾರದ ತಹಶೀಲ್ದಾರ್ ವಿರುದ್ಧ ಆಕ್ರೋಶ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.

ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.

ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.

ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ,‌ ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago