ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.
ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.
ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.
ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ, ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…